Sunday, 23 July 2017

ಅಂಗ ಲಿಂಗದಲ್ಲಿ ತರಹರವಾಗಿ

ಅಂಗ ಲಿಂಗದಲ್ಲಿ ತರಹರವಾಗಿ, ಸಮತೆ ಶಾಂತಿಯಲ್ಲಿ ತರಹರವಾಗಿ,
ಮನ ಜ್ಞಾನದಲ್ಲಿ ತರಹರವಾಗಿ, ಭಾವ ನಿರ್ಭಾವದಲ್ಲಿ ತರಹರವಾಗಿ ಇರಬಲ್ಲಡೆ,
ಆತನೆ ಅಚ್ಚಶರಣನು ಕಾಣಾ ಗುಹೇಶ್ವರಾ.

ಶಿವಭಕ್ತನಾಗಿ ತನ್ನ ಹಿಡಿದೆಹೆನೆಂದು ಹೋದಡೆ;

ಶಿವಭಕ್ತನಾಗಿ ತನ್ನ ಹಿಡಿದೆಹೆನೆಂದು ಹೋದಡೆ;
ನುಗ್ಗು ಮಾಡುವ, ನುಸಿಯ ಮಾಡುವ,
ಮಣ್ಣ ಮಾಡುವ, ಮಸಿಯ ಮಾಡುವ.
ಕೂಡಲಸಂಗಮದೇವರ ನೆರೆ ನಂಬಿದನಾದಡೆ;
ಕಡೆಗೆ ತನ್ನಂತೆ ಮಾಡುವ.

-ಬಸವಣ್ಣ

ಭೀಮನ ಅಮಾವಾಸ್ಯೆಯ ಮಹತ್

-:ಭೀಮನ ಅಮಾವಾಸ್ಯೆಯ ಮಹತ್ವ:-
         (ತಾ.23-7-2017, ರ ಭಾನುವಾರ)
                        ********
ಪತಿಗೆ ದೀರ್ಘಾಯುಷ್ಯ ಕರುಣಿಸಿ, ತಮ್ಮನ್ನು ದೀರ್ಘ ಸುಮಂಗಲಿಯಾಗಿ ಹರಸುವಂತೆ ಶಿವನನ್ನು ಪೂಜಿಸುವ ಹಬ್ಬ: 

ಶಿವ-ಪಾರ್ವತಿ
ಭಾರತೀಯ ಸಂಪ್ರದಾಯದಂತೆ ಹಿಂದೂಗಳು ಆಷಾಢದಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲ. ಆದರೆ ಆಷಾಢದ ಅಮಾವಾಸ್ಯೆಯ ದಿನ ಜ್ಯೋತಿರ್ಭೀಮೇಶ್ವರ ವ್ರತವನ್ನು ನವದಂಪತಿಗಳು ಸಡಗರದಿಂದ ಆಚರಿಸುತ್ತಾರೆ. ಈ ವ್ರತಕ್ಕೆ ಪತಿ ಸಂಜೀವಿನಿ ವ್ರತ ಎಂದೂ ಕರೆಯುವುದುಂಟು. ಪತಿಗೆ ದೀರ್ಘಾಯುಷ್ಯವನ್ನು ಕರುಣಿಸುವಂತೆ, ತಮ್ಮನ್ನು ದೀರ್ಘ ಸುಮಂಗಲಿಯಾಗಿ ಹರಸುವಂತೆ ಕೋರಿ ಶಿವನನ್ನು ಪೂಜಿಸುವ ಹಬ್ಬವೇ ಭೀಮನ ಅಮಾವಾಸ್ಯೆ.
ಭೀಮನ ಅಮಾವಾಸ್ಯೆಯನ್ನು ಮದುವೆಯಾದ ಹೆಂಗಸರು ಮಾತ್ರವಲ್ಲ, ಮದುವೆಯಾಗದ ಹೆಣ್ಣುಮಕ್ಕಳು ಕೂಡ ಆಚರಿಸಬಹುದು. ಮದುವೆಯಾಗದ ಹೆಣ್ಣುಮಕ್ಕಳು ಒಳ್ಳೆ ಗಂಡ ಸಿಗಲಿ ಎಂದು ಹಾಗೂ ಮದುವೆಯಾದ ಹೆಣ್ಣು ತನ್ನ ಗಂಡನ ಆಯುಷ್ಯ ಹೆಚ್ಚಲಿ ಎಂದು ದೇವರನ್ನು ಪ್ರಾರ್ಥಿಸಿ ಈ ವ್ರತ ಕೈಗೊಳ್ಳುತ್ತಾರೆ.

ಪೂಜಾ ವಿಧಾನ
ಗೃಹಿಣಿಯರು ಕೈಗೆ ಕಂಕಣ ಕಟ್ಟಿಕೊಂಡು ಜ್ಯೋರ್ತಿಭೀಮೇಶ್ವರನ್ನು ಧ್ಯಾನಿಸಿ, ವ್ರತ ಕೈಗೊಳ್ಳಬೇಕು. ರಾಹುಕಾಲ ಹೊರತುಪಡಿಸಿ ಬೆಳಗ್ಗೆ ಅಥವಾ ಸಂಜೆ ಯಾವುದೇ ಶುಭ ಮುಹೂರ್ತದಲ್ಲಿ ವ್ರತ ಕೈಗೊಳ್ಳಬಹುದು. ಒಂದು ತಟ್ಟೆಯಲ್ಲಿ ಅಕ್ಕಿ ಹಾಕಿ, ಅದರ ಮೇಲೆ ಎರಡು ದೀಪದ ಕಂಭ ನೆಟ್ಟು, ದೀಪದ ಎಣ್ಣೆ ಹಾಕಿ ಹಚ್ಚಬೇಕು. ಈ ದೀಪಸ್ತಂಭದಲ್ಲಿ ಶಿವ ಪಾರ್ವತಿಯನ್ನು ಆವಾಹನೆ ಮಾಡಿ ಪೂಜೆ ಸಲ್ಲಿಸುತ್ತಾರೆ. ಪೂಜಾ ಸಾಮಗ್ರಿಗಳ ಜತೆಗೆ 9 ಗಂಟಿನ ಗೌರಿ ದಾರ ಇಟ್ಟು ಪೂಜೆ ಮಾಡಿ ಆ ಬಳಿಕ ಕೈಗೆ ಕಟ್ಟಿಕೊಳ್ಳಬೇಕು. ಮೊದಲು ಗಣಪತಿ ಪೂಜೆ ಮಾಡಿ ನಂತರ ಭೀಮೇಶ್ವರನ ಪೂಜೆ ಮಾಡುತ್ತಾರೆ. ನೈವೇದ್ಯಕ್ಕೆ 9 ಕರಿಗಡುಬು ಅರ್ಪಿಸಲಾಗುತ್ತದೆ. ಆ ಬಳಿಕ ಗಂಡನ ಪಾದಪೂಜೆಯನ್ನು ನೆರವೇರಿಸಬೇಕು.

ವಿವಿಧ ರೀತಿ ಆಚರಣೆ:
ವ್ರತಾಚರಣೆ ಪ್ರಾಂತ್ಯದಿಂದ ಪ್ರಾಂತ್ಯಕ್ಕೆ ಭಿನ್ನತೆಯಿಂದ ಕೂಡಿದೆ. ಉದ್ದೇಶ ಒಂದೇ ಆದರೂ, ಆಚರಣೆಯಲ್ಲಿ ವಿವಿಧತೆಯನ್ನು ಕಾಣಬಹುದು. ದಕ್ಷಿಣ ಕನ್ನಡದಲ್ಲಿ ಇದನ್ನು ಆಟಿ ಅಮಾವಾಸ್ಯೆ ಎಂದು ಕರೆಯುತ್ತಾರೆ. ಈ ದಿನದಂದು ಆ ಭಾಗದ ಸಂಸ್ಕೃತಿ, ಆಚಾರ, ವಿಚಾರಗಳನ್ನು ಬಿಂಬಿಸುವ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಉತ್ತರ ಕನ್ನಡದ ಕೆಲವು ಭಾಗಗಳಲ್ಲಿ ಇದಕ್ಕೆ ಕೊಡೆ ಅಮಾವಾಸ್ಯೆ ಎಂದು ಕರೆಯುತ್ತಾರೆ. ಈ ದಿನದಂದು ಮಗಳೊಂದಿಗೆ ಮನೆಗೆ ಬಂದು ಅಳಿಯನಿಗೆ ಮಾವ ಕೊಡೆ ನೀಡಿ ಸತ್ಕರಿಸುತ್ತಾರೆ.
ಈ ಹಬ್ಬದ ಇನ್ನೊಂದು ವಿಶೇಷತೆ ಭಂಡಾರ:

ಭಂಡಾರವನ್ನು ಕರಿಗಡುಬು ಮೈದಾ ಹಿಟ್ಟಿನಿಂದ ಮಾಡಿಕೊಳ್ಳಬಹುದು. ಇದನ್ನು ಮಾಡುವಾಗ ಇದರೊಳಗೆ ದುಡ್ಡು/ನಾಣ್ಯವನ್ನು ಇಡಬೇಕು. ಇದನ್ನು ಹೊಸ್ತಿನ ಮೇಲೆ ಇಟ್ಟು ಪೂಜೆ ಮಾಡಬೇಕು. ಅಣ್ಣ/ತಮ್ಮ ಇದನ್ನು ಒಡೆಯುತ್ತಾರೆ. ಅವರಿಗೆ ಆರಿತ ಮಾಡಿ, ಒಳಗೆ ಇರುವ ದುಡ್ಡಿನ ಜತೆಗೆ ಉಡುಗೊರೆ ಕೊಡಬೇಕು.

ಪೌರಾಣಿಕ ಹಿನ್ನೆಲೆ:-
ಪುರಾಣಗಳ ಪ್ರಕಾರ ಶಿವನು ಪಾರ್ವತಿಯನ್ನು ಪತ್ನಿಯನ್ನಾಗಿ ಸ್ವೀಕರಿಸಿದ್ದು ಭೀಮನ ಅಮಾವಾಸ್ಯೆ ದಿನ. ಪಾರ್ವತಿ ಸಮೃದ್ಧಿ, ಸಂತಾನ, ಪತಿವ್ರತೆ, ಶಕ್ತಿಯ ಸಂಕೇತ. ಹೀಗಾಗಿ ಈ ದಿನದಂದು ಹೆಂಗಳೆಯರು ವ್ರತ ಕೈಗೊಂಡು ಶಿವ ಮತ್ತು ಪಾರ್ವತಿಯನ್ನು ಆರಾಧಿಸಿದರೆ ಅವರಿಗೆ ಉತ್ತಮನಾದ ಗಂಡ ಸಿಗುತ್ತಾನೆ. ಅದೇ ರೀತಿ ವಿವಾಹಿತ ಹೆಂಗಸರು ಗಂಡನಿಗೆ ದೀರ್ಘಾಯುಷ, ಯಶಸ್ಸು ಹಾಗೂ ಸಂತೋಷವನ್ನು ಬಯಸಿ ಪೂಜೆ ಸಲ್ಲಿಸುತ್ತಾರೆ.
ಶುಭವಾಗಲಿ

Saturday, 22 July 2017

ಒಮ್ಮೆ ನಾಯಿ ಮತ್ತು ಕತ್ತೆಯಾ ನಡುವೆ ಓಟದ ಸ್ಪರ್ಧೆ ನಡಿತಾಯಿತ್ತು.!

ಒಮ್ಮೆ ನಾಯಿ ಮತ್ತು ಕತ್ತೆಯಾ ನಡುವೆ ಓಟದ ಸ್ಪರ್ಧೆ ನಡಿತಾಯಿತ್ತು.!

ನಾಯಿಯು ತನ್ನ ಮನಸ್ಸಿನಲ್ಲಿ ಸಂತೋಷ ಪಡುತ್ತ ಕತ್ತೆ ಜೋತೆನ ನನ್ನ ಸ್ಪರ್ಧೆ ಎಂದು ಮುಗುಳ್ ನಗುತ್ತ, ಬಹಳ ಅಂತರದಿಂದ ಗೆಲ್ಲುವೆ ಎಂಬ ಆತ್ಮ ವಿಸ್ವಾಸದಿಂದ ಸ್ಪರ್ಧೆಗೆ ಇಳಿದಿತ್ತು.!
ಓಟ ಪ್ರಾರಂಭವಾಯಿತು, ನಾಯಿಯು ತನ್ನ ಸಂಪೂರ್ಣ ಬಲವನ್ನ ಉಪಯೋಗಿಸಿ ಕತ್ತೆಗಿಂತ ಮುಂದೆ ಓಡತೊಡಗಿತು.!
ಒಂದು ಓಣಿಯಿಂದ ಇನ್ನೋಂದು ಓಣಿಗೆ ಹೋಗುತ್ತಲೇ ಶುರುವಾಯಿತು ನೋಡಿ ಎದುರಾಳಿಗಳ ಕಾಟ, ಎದುರಾಳಿಗಳು ಯಾರಂತಿರಾ? ತನ್ನ ಕುಲಭಾಂದವರೇ, ತಾನು ಓಡುವುದನ್ನ ನೋಡಿ ಆ ಓಣಿಯಾ ನಾಯಿಗಳು ಅದನ್ನ ತಡೆಯಲು ಪ್ರಾರಂಭಿಸಿದವು,ಜಗಳಕ್ಕೆ ನಿಂತವು.
ಆಗ ಅದು ತನ್ನೆಲ್ಲ ಬಲವನ್ನು ಉಪಯೋಗಿಸಿ ಅಲ್ಲಿಂದ  ಮುಂದೆ ಸಾಗಿತು, ಮುoದೆ ಸಾಗಿದಂತೆ ಮತೋಂದು ಓಣಿ ಆ ಓಣಿ ಹೊಕ್ಕಿತು ಅಲ್ಲಿ ಹಿಂದಿನ ಓಣಿಕ್ಕಿಂತ ಹೆಚ್ಚು ನಾಯಿಗಳು ಎದುರು ನಿಂತವು, ಇದನ್ನ ಮುಂದೆ ಹೊಗದಂತ್ತೆ ತಡೆದು ಅದರ ಮೇಲೆ ಹರಿಹೈದವು, ಕಾಲುಯಳೆಯಲು ಪ್ರಾರಂಭಿಸಿದವು. ತಾನು ತನ್ನ ಕುಲಭಾಂದವರಿಂದ ತಪ್ಪಿಸಿ ಕೊಂಡು ಓಡಿ ತನ್ನ ಗುರಿತಲುಪವಸ್ಟಿಗೇ ಆ ಕತ್ತೆ ಯಾವುದೇ ಅಡೆ ತಡೆಯಿಲ್ಲದೆ ವಿಜಯವನ್ನು ಸಾದಿಸಿ ಬೀಟ್ಟಿತ್ತು.

ಅದನ್ನ ಕಂಡ ನಾಯಿ ತನ್ನ ಮನಸ್ಸಿನಲ್ಲೆ ನನ್ನವರೇ ನನಗೆ ಶತ್ರುಗಳಾದರಲ್ಲ ಎಂದು ಮರಗಿ, ಸೋತು ಸಣ್ಣಗಾಯಿತು..!
ಗೆಳೆಯರೇ ಈ ರೀತಿಯಾ ಸನ್ನಿವೆಶಗಳು ನಮ್ಮ ಬಹುಜನರ ಬಾಳಿನಲ್ಲಿ ನಡಿತ್ತಾನೇ ಬಂದಿವೆ. 
ನಮ್ಮನಮ್ಮಲ್ಲಿ ಹೊಡೆದಾಡುವುದು, ಕಾಲೆಳೆಯುವುದು ನಮ್ಮ ಸಮಾಜದಲ್ಲಿ ಕಂಡು ಬರುತ್ತದೆ. ಎಲ್ಲಿಯವರೆಗೆ ಒಗ್ಗಟ್ಟಾಗುವುದಿಲ್ಲವೋ ಅಲ್ಲಿಯವರೆಗೆ ಶತ್ರುಗಳು ತಮ್ಮ ಬೇಳೆ ಬೆಯಿಸಿಕೊಳ್ಳುತ್ತಾರೆ.

ಇದು ಸದ್ಯದ ಮಟ್ಟಿಗೆ ನಮ್ಮಲ್ಲೇ ನಡೆಯುತ್ತಿರುವ ನಿದರ್ಶನ ...

*ಇದನ್ನು ದಯವಿಟ್ಟು ಗಮನಿಸಿ ಬಂದುಗಳೆ* 

ಕನ್ನಡಿಗರಿಗೊಂದು ಕಿವಿಮಾತು

_*ಕನ್ನಡಿಗರಿಗೊಂದು ಕಿವಿಮಾತು*_

ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ ಅಂ  ಅಃ ಈಗೇ ಆ ಅಕ್ಷರಗಳನ್ನು ಪಠಿಸುವುದರಿಂದ ಮುಖವೆಲ್ಲಾ ಕದಡುತ್ತ ವ್ಯಾಯಮವಾಗುತ್ತದೆ.
ಶುದ್ಧ ಪರಿಶುದ್ಧ ಜೇನಿನ ಹಾಗೆ.... ನಮ್ಮ ಕನ್ನಡ ಭಾಷೆ ಇದೆ.
ಪೂರ್ವದಲ್ಲಿ ಗುರುಗಳು ಮಕ್ಕಳ ಹತ್ತಿರ ವರ್ಣಮಾಲೆಗಳನ್ನು ಬಾಯಿಪಾಠ ಮಾಡಿಸುತ್ತಿದ್ದರು. ಈಗೇ ಕಂಠಪಾಠ ಮಾಡುವುದರಿಂದ ಕಂಠದಿಂದ ಮುಖದವರೆಗೆ ನಮಗೆ ತಿಳಿಯದೆನೆ ವ್ಯಾಯಾಮವಾಗುತ್ತಿತ್ತು.
ಹೇಗೆಂದರೆ 👇🏻
ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ ಅಂ ಅಃ
ಈಗೇ ಅಕ್ಷರಗಳನ್ನು ಪಠಿಸುವುದರಿಂದ ಮುಖವೆಲ್ಲಾ ಕದಡುತ್ತಾ ವ್ಯಾಯಾಮವಾಗುತ್ತದೆ.
ಕ ಖ ಗ ಘ ಙ 👉🏻ಕಂಠ ಭಾಗ 
ಚ ಛ ಜ ಝ ಞ 👉🏻 ಕಂಠದ ಮೇಲಿನ ನಾಲಿಗೆಯ ಮೊದಲ ಭಾಗ
ಟ ಠ ಡ ಢ ಣ 👉🏻 ನಾಲಿಗೆಯ ಮಧ್ಯಭಾಗ 
ತ ಥ ದ ಧ ನ 👉🏻 ನಾಲಿಗೆಯ ಕೊನೆಯ ಭಾಗ 
ಪ ಫ ಬ ಭ ಮ 👉🏻 ತುಟಿಗಳು 
ಯ ರ ಲ ವ ಶ ಷ ಸ ಹ ಳ ಕ್ಷ ಜ್ಞ 👉🏻ಬಾಯೆಲ್ಲ ಈಗೇ ಮುಖವೆಲ್ಲಾ ಹಲ್ಲುಗಳ ಸಮೇತ ವ್ಯಾಯಾಮವಾಗುತ್ತದೆ. 

ಸುಂದರ ಸುಮಧುರ ಸೌಮ್ಯವಾದ ಮೃದುತ್ವದಿಂದ ಕೂಡಿದ ಪರಿಶುದ್ಧ ಜೇನು ನಮ್ಮ ಕನ್ನಡ ಭಾಷೆ.ಆನಂದವಾಗಿ ಮನಸ್ಸಿಗೆ ಹಾಯ್ ಆಗಿ ಕೇಳಿಸುವ ಮಾತುಗಳು ನಮ್ಮೆಲ್ಲರ ಬಾಯಿಂದ ಉಚ್ಚರಿಸಿದರೆ ಎಷ್ಟು ಚೆನ್ನಾಗಿರುತ್ತದೆ. ಕನ್ನಡ ಭಾಷೆಯನ್ನು ಅಂದವಾಗಿ ಬರೆಯುವವರಿಗೆ ಚಿತ್ರಕಲೆ ಸ್ವಂತವಾಗುವುದಂತೆ ಏಕೆಂದರೆ ನಮ್ಮ ವರ್ಣಮಾಲೆಗೆ ಅಷ್ಟು ಮೆಲುಕು ಇದೆಯಂತೆ.
ನಮ್ಮೊಳಗಿನ ಭಾವವನ್ನು ವಿವರವಾಗಿ ಮಾತೃಭಾಷೆಯಲ್ಲಿ ವರ್ಣಿಸುವಷ್ಟು ಮತ್ತೆ  ಬೇರೆ ಯಾವ ಭಾಷೆಯಲ್ಲೂ ವರ್ಣಿಸಲು ಸಾಧ್ಯವಿಲ್ಲ. ಕನ್ನಡಿಗರೆಂದರೆ ಮುಂಜಾವ ಅರಳಿದ ಪುಷ್ಪದಂತೆ  ಅವನ್ನೋಡಿದರೆ ಎಷ್ಟು ಆಹ್ಲಾದಬರಿತವಾಗುವುದೋ.... ಹಾಗೆ ಕನ್ನಡಿಗರ ಮನಸ್ಸು. 
ಕನ್ನಡದಲ್ಲಿ ಮಾತಾಡಿ...
ಕನ್ನಡದಲ್ಲಿ ಬರೆಯಿರಿ....
ಕನ್ನಡ ಪುಸ್ತಕಗಳನ್ನು ಓದಿರಿ... ಓದಿಸಿ....
ಪರಿಶುದ್ಧ ಕನ್ನಡ ಭಾಷೆಯ ಸವಿಯನ್ನು ಆಸ್ವಾದಿಸಿ. 

ಆವ ವಿದ್ಯೆಯ ಕಲಿತಡೇನು

ಆವ ವಿದ್ಯೆಯ ಕಲಿತಡೇನು
ಸಾವ ವಿದ್ಯೆ ಬೆನ್ನಬಿಡದು.
ಅಶನವ ತೊರೆದಡೇನು, ವ್ಯಸನವ ಮರೆದಡೇನು
ಉಸುರ ಹಿಡಿದಡೇನು, ಬಸುರ ಕಟ್ಟಿದಡೇನು
ಚೆನ್ನಮಲ್ಲಿಕಾರ್ಜುನದೇವಯ್ಯಾ, ನೆಲ ತಳವಾರನಾದಡೆ ಕಳ್ಳನೆಲ್ಲಿಗೆ ಹೋಹನು

-ಅಕ್ಕಮಹಾದೇವಿ

ಗೆಜ್ಜೆಯ ಬೆಲೆ ಸಾವಿರ ಸಾವಿರ ಹಾಕುವದು ಕಾಲಿನಲ್ಲಿ

-: 🌸ಸತ್ಯ🌸 :- 

🌸 ಗೆಜ್ಜೆಯ ಬೆಲೆ ಸಾವಿರ ಸಾವಿರ 
ಹಾಕುವದು ಕಾಲಿನಲ್ಲಿ ...

ಕುಂಕುಮದ ಬೆಲೆ ಪೈಸೆಯಲ್ಲಿ 
ಆದರೆ ಹಚ್ಚುವದು ಹಣೆಯಲ್ಲಿ ...

🌸💰 ಬೆಲೆ ಮುಖ್ಯವಲ್ಲ ..
    🔴ಇಲ್ಲಿ ಕೃತಿ ಮುಖ್ಯ ...

🌸 ಗೀತಾ ಮತ್ತು ಖುರಾನ್ ಒಂದೇ ಮನೆಯಲ್ಲಿ ಇದ್ದರೂ
ಎಂದು ಜಗಳ ಕಾಯುವುದಿಲ್ಲ...

ಇದರ ಬಗ್ಗೆ ಜಗಳಾಡುವವರು 
ಎಂದೋ ಇವುಗಳನ್ನು ಓದಿಲ್ಲ ..

🌸 ಉಪ್ಪಿನಂತೆ ಕಟುಮಾತುನು 
ಹೆಳುವವನು ನಿಜ ಸ್ನೇಹಿತ ...

ಸಕ್ಕರೆಯಂತೆ ಸಿಹಿ ಮಾತಾಡುವ 
ನಯ ವಂಚಕ....

🌸 ಅದಕ್ಕೇ ಉಪ್ಪಿನಲ್ಲಿ ಹುಳುಬಿದ್ದ ಇತಿಹಾಸವಿಲ್ಲಾ ....

ಇತಿಹಾಸದಲ್ಲಿ ಹುಳು ಬಿಳದ ಸಿಹಿಯಿಲ್ಲ...

🌸 ಈ..ಮಂದಿರ - ಮಶೀಧಿಗಳು 
ಬಹಳ ವಿಸ್ಮಯ ....

ಇಲ್ಲಿ ಭಿಕ್ಷುಕ ಹೊರಗೆ ಭಿಕ್ಷೇ ಬೇಡತಾನೆ...

ಶ್ರೀಮಂತಾ ಒಳಗೆ ಭಿಕ್ಷೇ ಬೆಡತಾನೇ.... 

🌸 ಕಾಣದ ದೇವರಿಗೆ ಹಾಲು ಖರ್ಜುರ ನೈವೇದ್ಯಾ ....

ಹಸಿದ ಬಡವನಿಗೆ ಒಣ ರೊಟ್ಟಿ ಹಳಸಿದ ಅನ್ನಾ ಇದು ಎಂತಾ ವಿದ್ಯಾ....

🌸 ಏ ಮಾನವಾ ಈ ಜೀವನವು ಆಷ್ಟೂಂದು ಒಳ್ಳೆಯದೇನಲ್ಲ ....

ಒಳ್ಳೆಯದೇ ಆಗಿದ್ದರೆ ಈ ಮನುಷ್ಯ 
ಅಳುತ್ತಾ ಈ ಜೀವನಕ್ಕೆ ಬರುತ್ತಿರಲಿಲ್ಲ ...

ಮತ್ತು ಹೊಗುವಾಗ ಎಲ್ಲರನು ಅಳಿಸಿ ಹೂಗುತ್ತಿರಲಿಲ್ಲ....

🌸 ಭಾ ಎಂದರೊ ಸನ್ನ ಮಾರ್ಗದಲ್ಲಿ ಯಾರು ಬರುಪದಿಲ್ಲ...

ಕರೆಯದಿದ್ದರೊ ಕೆಟ್ಟ ಮಾರ್ಗದಲ್ಲಿ ಎಲ್ಲರೂ ಬರುತ್ತಾರೆ....

ಅದಕ್ಕೇ...

🌸 ಸಾರಾಯೀ ಮಾರುವವ ಕುಳಿತಲ್ಲೀಯೇ ಎಲ್ಲರೂ.... ಹೂಕ್ತಾರೇ ...

ಆದರೆ ಹಾಲು ಮಾರುವವ ಅವನೇ ಎಲ್ಲರ ಬೀದಿ ಬೀದೀ ಮನೆ ಮನೆಗೆ ಬರತಾನೆ....

🌸 ಹಾಲು ಮಾರುವನಿಗೆ ಕೇಳತಾರೆ ಹಾಲಿನಲ್ಲಿ ನೀರು ಬೆರೆಸಿದಿಯಾ ಅಂತಾ.....

ದುಪ್ಪಟ್ಟು ಹಣ ಕೊಟ್ಟ ಕೊಂಡ ಸಾರಾಯಿಗೇ ತಾವೇ ಕೈಯಾರ ನೀರು ಬೆರಸಿ ಕುಡಿತಾರೆ..
ವಾರೆ ದುನಿಯಾ....ವಾ

🌸 ಮದುವೆ ಭಾರಾತುಗಳಲ್ಲಿ ಮದುಮಗ ಹಿಂದೆ ದುನಿಯಾ ಮುಂದೇ....

ಶವ ಯಾತ್ರೆಯಲ್ಲಿ ಹೆಣಾ ಮುಂದೆ 
ದುನಿಯಾ ಹಿಂದೆ ಹಿಂದೆ....

🌸 ಹೆಣವನ್ನು ಮಟ್ಟಿದರೆ ಸ್ನಾನ 
ಮಾಡ್ತಾರೆ ....

ಮೂಖ ಪ್ರಾಣಿಯ ಕೊಂದು ಅದರ ಹೆಣವನ್ನು ತಿಂತಾರೆ ...

🌸 ಮುಂಬತ್ತಿ ಹಚ್ಚಿ ಸತ್ತವರನು 
ನೆನೆಯುತ್ತಾರೆ ....

ಮುಂಬತ್ತಿಯ ಆರಿಸಿ ಜನ್ಮ ದಿನ 
ಆಚರಣೆಮಾಡ್ತಾರೆ....

🌸 ಯಾವುದು ನಿನ್ನ ಭಾಗ್ಯದಲ್ಲಿ 
ಇದೆಯೊ ಅದು ನಿನಗೆ ದೊರತೇ ದೊರೆಯುತ್ತದೆ ...

ಯಾವುದು ನಿನ್ನ ಭಾಗ್ಯದಲ್ಲಿ ಇಲ್ಲವೋ ಅದು ದೂರೆತರೊ ಹೊರಟು ಹೋಗುತ್ತದೆ ....

ಇದುವೇ ಸತ್ಯ :- 🙏🙏🙏
 ಸ್ನೇಹಿತರೇ