Saturday, 15 July 2017

ಶರಣ ಸಂಬಂಧವನರಿದ ಬಳಿಕ

ಶರಣ ಸಂಬಂಧವನರಿದ ಬಳಿಕ
ಮರಳಿ ಭವಿಯ ಬೆರಸಲಾಗದು.
ಬ್ರಹ್ಮೇತಿ ಭ್ರೂಣಹತ್ಯ ವೈತರಣಿ ದುರ್ಗತಿ
ಪಂಚಮಹಾಪಾತಕದಿಂದಧಿಕ ನೋಡಾ.
ಅಳುಪಿ ಭವಿಯೊಡನುಂಡಡೆ ಭಕ್ತನಲ್ಲ
ಕೂಡಲಸಂಗಮದೇವಾ.

-ಬಸವಣ್ಣ

No comments:

Post a Comment