Saturday, 22 July 2017

ಆವ ವಿದ್ಯೆಯ ಕಲಿತಡೇನು

ಆವ ವಿದ್ಯೆಯ ಕಲಿತಡೇನು
ಸಾವ ವಿದ್ಯೆ ಬೆನ್ನಬಿಡದು.
ಅಶನವ ತೊರೆದಡೇನು, ವ್ಯಸನವ ಮರೆದಡೇನು
ಉಸುರ ಹಿಡಿದಡೇನು, ಬಸುರ ಕಟ್ಟಿದಡೇನು
ಚೆನ್ನಮಲ್ಲಿಕಾರ್ಜುನದೇವಯ್ಯಾ, ನೆಲ ತಳವಾರನಾದಡೆ ಕಳ್ಳನೆಲ್ಲಿಗೆ ಹೋಹನು

-ಅಕ್ಕಮಹಾದೇವಿ

No comments:

Post a Comment