ಸುಳಿದಡೆ ಒಡಲಿಲ್ಲ ನಿಂದಡೆ ನೆಳಲಿಲ್ಲ
ನಡೆದಡೆ ಗಮನವಿಲ್ಲ ನುಡಿದಡೆ ಶಬ್ದವಿಲ್ಲ ದಗ್ಧಪಟನ್ಯಾಯವಾಗಿ.
ಉಂಡಡೆ ಉಪಾಧಿಯಿಲ್ಲ ಉಣದಿದ್ದಡೆ ಕಾಂಕ್ಷೆಯಿಲ್ಲ
ಯಥಾಲಾಭಸಂತುಷ್ಟನಾಗಿ.
ಸ್ತುತಿಯಿಲ್ಲ ನಿಂದೆಯಿಲ್ಲ ನಂಟಿಲ್ಲ ಹಗೆಯಿಲ್ಲ
ಅರಿವಿಲ್ಲ ಮರಹಿಲ್ಲ ನಾನೆಂಬ ನೆನಹಿಲ್ಲವಾಗಿ.
ಇದಕ್ಕೆ ಶ್ರುತಿ:
ಯತ್ಪ್ರಾಣೇ ಲಿಂಗಸಂಧಾನಂ ತಲ್ಲಿಂಗಂ ಪ್ರಾಣಸಂಯುತಂ
ಪ್ರಾಣಲಿಂಗದ್ವಯೋರ್ಭೇದೋ ನ ಭೇದಶ್ಚ ನ ಸಂಶಯಃ
ದಗ್ಧಾಂಬರಂ ಹಿ ಕರ್ಮಾಣಿ ಚೇಂದ್ರಿಯಾಣಿ ಮನೋ ವಚಃ
ಭಾವಸದ್ಭಾವನಿರ್ವಾಣಃ ಪರೇ ಯಸ್ಯ ವಿಲೀಯತೇ
ಇಂತೆಂದುದಾಗಿ,
ಸೌರಾಷ್ಟ್ರ ಸೋಮೇಶ್ವರನ ಶರಣರು ಲಿಂಗಪ್ರಾಣಿಗಳಾಗಿಅಂಗವ ಮರೆಗೊಂಡು ಎಂತಿರ್ದಡಂ ಎಂತು ನಡೆದಡಂತೆ ಸಂತ.
-ಆದಯ್ಯ
No comments:
Post a Comment